Students Scholarship 2022-23

- November 08, 2022

 2022-23ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!



2022-23ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ / ಅರೆಅಲೆಮಾರಿ ಪ್ರವರ್ಗ -1 ವಿದ್ಯಾರ್ಥಿಗಳಿಂದ , ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ!

 2022-23 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ / ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :31/12/2022

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ : https://ssp.karnataka.gov.in/ 

ಯಾರು ಅರ್ಜಿ ಸಲ್ಲಿಸುವುದು? :  


ಒಂದನೇ ತರಗತಿಯಿಂದ 10 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹವಿರುತ್ತಾರೆ.

ಅರ್ಜಿ ಸಲ್ಲಿಸಲು ಅಗತ್ಯವಿರುವ ಮಾಹಿತಿ / 

ದಾಖಲೆ ಶಾಲೆಯಲ್ಲಿ ಪ್ರವೇಶ ಪಡೆದಿರುವ ಬಗ್ಗೆ ಸ್ಯಾಟ್ಸ್ - ಐಡಿ ( SATS - ID ) ( ಸ್ಯಾಟ್ಸ್ - ಐಡಿ ತಿಳಿಯಲು ವೆಬ್ ವಿಳಾಸ : http://sts.karnataka.gov.in ) 


ವಿದ್ಯಾರ್ಥಿಯ ಆಧಾರ್ ಸಂಖ್ಯೆ 

ಪೋಷಕರ ಆಧಾರ್‌ ಸಂಖ್ಯೆ 

ಜಾತಿ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆ 

ಆದಾಯ ಪ್ರಮಾಣ ಪತ್ರದ ಆರ್‌.ಡಿ . ಸಂಖ್ಯೆ 

ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆದಿದ್ದಲ್ಲಿ , ವಿದ್ಯಾರ್ಥಿ ನಿಲಯ ಪ್ರವೇಶ ಸಂಖ್ಯೆ ( ಸಂಬಂಧಿಸಿದ ಇಲಾಖೆಯಿಂದ ಪಡೆದಿದ್ದು ) 

ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದಿದ್ದಲ್ಲಿ ಹಿಂದಿನ ಸಾಲಿನ ಅರ್ಜಿ ಸಂಖ್ಯೆ ( ಸಂಬಂಧಿಸಿದ ಇಲಾಖೆಯಿಂದ ಪಡೆದಿದ್ದು ) 

ಆಧಾರ್‌ ಸಂಖ್ಯೆ ಇಲ್ಲದಿದ್ದಲ್ಲಿ , 

ಆಧಾರ್ ನೋಂದಣಿ ಮಾಡಿಸಿದ ಇ.ಐ.ಡಿ ಸಂಖ್ಯೆ , 

ಬ್ಯಾಂಕ್ ಖಾತೆ ಸಂಖ್ಯೆ , ಐ.ಎಫ್.ಎಸ್.ಸಿ ಸಂಖ್ಯೆ , ಬ್ಯಾಂಕಿನ ವಿಳಾಸ 

ಪೋಷಕರ ಆಧಾರ್‌ ನಂಬರ್‌ಗೆ ಲಿಂಕ್ ಮಾಡಿರುವ ಮೊಬೈಲ್ ನಂ ಹಾಗೂ ಭೌತಿಕ ಅನುಮತಿ ಪತ್ರ



1 . ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು : 

ಕುಟುಂಬದ ವಾರ್ಷಿಕ ಆದಾಯ ಮಿತಿ : ರೂ . 2.50 ಲಕ್ಷ / ವಾರ್ಷಿಕ


ಅಲೆಮಾರಿ / ಅರೆ ಅಲೆಮಾರಿ ವಿದ್ಯಾರ್ಥಿವೇತನ :ರೂ . 1.00 ಲಕ್ಷ / ವಾರ್ಷಿಕ ಪ್ರವರ್ಗ -1 ರ ವಿದ್ಯಾರ್ಥಿಗಳಿಗೆ ಮಾತ್ರ

ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನ :

ರೂ . 44,500 / - ವಾರ್ಷಿಕ ಪ್ರವರ್ಗ -2 ಎ , 3 ಎ , 3 ಬಿ , ಇತರೆ ಹಿಂದುಳಿದ ವರ್ಗಗಳಿಗೆ


2. ಫಲಾನುಭವಿಯ ಜಾತಿ : ರಾಜ್ಯ ಸರ್ಕಾರವು ಅಧಿಸೂಚಿಸಿರುವ ಪ್ರವರ್ಗ -1 , 2 ಎ , 3 ಎ ಮತ್ತು 3 ಬಿ ಹಾಗೂ ಕೇಂದ್ರ ಸರ್ಕಾರವು ಅಧಿಸೂಚಿಸಿರುವ ಇತರೆ ಹಿಂದುಳಿದ ವರ್ಗಗಳಡಿ ಬರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯಕ್ಕೆ ಅರ್ಹರಾಗುವುದಿಲ್ಲ.

ಆದಾಯ ಮತ್ತು ಮೆರಿಟ್ ಆಧಾರದಲ್ಲಿ ಮಂಜೂರಾತಿ : 


ಪ್ರವರ್ಗ -1 ಮತ್ತು ಅಲೆಮಾರಿ / ಅರೆ ಅಲೆಮಾರಿ ಜನಾಂಗಗಳಿಗೆ ಸೇರಿದ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುವುದು .


ತದನಂತರ ಇನ್ನುಳಿದ ವಿದ್ಯಾರ್ಥಿಗಳಿಗೆ ಆದಾಯ ಮತ್ತು ಮೆರಿಟ್ ಆಧಾರದ ಮೇಲೆ ರಾಜ್ಯ ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗುವುದು.


ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ : ಸಂಬಂದಪಟ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ /ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ / https://ssp.karnataka.gov.in/


EmoticonEmoticon

 

Start typing and press Enter to search